July 23, 2026
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ಕಳೆದ ಮಾ. 29 ರಂದು ಬೆಳಿಗ್ಗೆ ಮುತ್ತಲೀಬ್‌ ಅವರು ತಮ್ಮ KA-70-M-5850 ಆಲ್ಟೋ ಕೆ -10 ಕಾರನ್ನು ಉಜಿರೆ ಗ್ರಾಮದ ಉಜಿರೆ ಕಾಲೇಜು ರಸ್ತೆ ಪಾರ್ಕಿಂಗ್ ಇರುವ ಅವರ ಅಂಗಡಿ ಪಕ್ಕದಲ್ಲಿ ನಿಲ್ಲಿಸಿ, ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ರಾತ್ರಿ 10 ಗಂಟೆಗೆ ಮನೆಗೆ ಹೋಗಲು ಹೋದಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ ಕಾರು ಕಂಡು ಬರಲಿಲ್ಲ ನಂತರ ಕಾರಿನ ಪತ್ತೆಯ ಬಗ್ಗೆ ತನ್ನ ಸ್ನೇಹಿತರಲ್ಲಿ ಹಾಗೂ ಇತರರಲ್ಲಿ ವಿಚಾರಿಸಿದ್ದು ಕಾರು ಪತ್ತೆ ಯಾಗಿರುವುದಿಲ್ಲ ಕಳವು ಮಾಡಿಕೊಂಡು ಹೋದ ಕಾರಿನ ಅಂದಾಜು ಮೌಲ್ಯ 6.50.000/-(ಆರು ಲಕ್ಷದ ಐವತ್ತು ಸಾವಿರ) ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 20/2025 ಕಲಂ 303(1) BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya
error: Content is protected !!