April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಇದರ ನೇತ್ರಾವತಿ ಸಭಾಂಗಣದಲ್ಲಿ ಮಾನ್ವಿ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಧರ್ಮಸ್ಥಳ ಮತ್ತು ಜಿಲ್ಲಾ ಕೃಷಿ ತರಬೇತಿ ಬೆಳ್ತಂಗಡಿ ಇದರ ಸಹಯೋಗದಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ಪ್ರಭಾಕರ್ ಮಯ್ಯ ಇವರು ಸಾವಯವ ಕೃಷಿಯ ಬಗ್ಗೆ , ಕೃಷಿಗೆ ರೋಗಗಳ ನಿಯಂತ್ರಣದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದು ಕೃಷಿ ಇಲಾಖೆಯ ಸೌಲಭ್ಯದ ಬಗ್ಗೆ ತಿಳಿಸಿದರು.


ಉಜಿರೆ ಕೃಷಿ ಸಖಿ ಭಾಗೀರಥಿಯವರು ಅಣಬೆ ಕೃಷಿ ಬಗ್ಗೆ ತರಬೇತಿ ನೀಡಿದರು. ಕೃಷಿ ಸಖಿ ಸುಚೇತಾ ಸ್ವಾಗತಿಸಿ ಅಚ್ಚು ಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಿದರು.
ಒಕ್ಕೂಟದ ಕಾರ್ಯದರ್ಶಿ ವಿಜಯಲಕ್ಷ್ಮಿ, ಪದಾಧಿಕಾರಿಯವರು, ಪಂಚಾಯತ್ ಸಿಬ್ಬಂದಿಗಳಾದ ವಂದನಾ, ಶಿವಾನಂದ ಗ್ರಂಥ ಪಾಲಕಿ ಮಂಜುಳಾ, ಎಮ್.ಬಿ.ಕೆ ಚಂದ್ರಾವತಿ, ಎಲ್ ಸಿ ಆರ ಪಿ ವೀಣಾ, ಪಶುಸಖಿ ಯಶೋದ ಉಪಸ್ಥಿತರಿದ್ದು ಸಹಕರಿಸಿದರು. ಗ್ರಾಮದ ಕೃಷಿಕರು ಮತ್ತು ಮಹಿಳೆಯರು ತರಬೇತಿಯ ಪ್ರಯೋಜನ ಪಡೆದುಕೊಂಡರು.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
error: Content is protected !!