September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಇದರ ನೇತ್ರಾವತಿ ಸಭಾಂಗಣದಲ್ಲಿ ಮಾನ್ವಿ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಧರ್ಮಸ್ಥಳ ಮತ್ತು ಜಿಲ್ಲಾ ಕೃಷಿ ತರಬೇತಿ ಬೆಳ್ತಂಗಡಿ ಇದರ ಸಹಯೋಗದಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ಪ್ರಭಾಕರ್ ಮಯ್ಯ ಇವರು ಸಾವಯವ ಕೃಷಿಯ ಬಗ್ಗೆ , ಕೃಷಿಗೆ ರೋಗಗಳ ನಿಯಂತ್ರಣದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದು ಕೃಷಿ ಇಲಾಖೆಯ ಸೌಲಭ್ಯದ ಬಗ್ಗೆ ತಿಳಿಸಿದರು.


ಉಜಿರೆ ಕೃಷಿ ಸಖಿ ಭಾಗೀರಥಿಯವರು ಅಣಬೆ ಕೃಷಿ ಬಗ್ಗೆ ತರಬೇತಿ ನೀಡಿದರು. ಕೃಷಿ ಸಖಿ ಸುಚೇತಾ ಸ್ವಾಗತಿಸಿ ಅಚ್ಚು ಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಿದರು.
ಒಕ್ಕೂಟದ ಕಾರ್ಯದರ್ಶಿ ವಿಜಯಲಕ್ಷ್ಮಿ, ಪದಾಧಿಕಾರಿಯವರು, ಪಂಚಾಯತ್ ಸಿಬ್ಬಂದಿಗಳಾದ ವಂದನಾ, ಶಿವಾನಂದ ಗ್ರಂಥ ಪಾಲಕಿ ಮಂಜುಳಾ, ಎಮ್.ಬಿ.ಕೆ ಚಂದ್ರಾವತಿ, ಎಲ್ ಸಿ ಆರ ಪಿ ವೀಣಾ, ಪಶುಸಖಿ ಯಶೋದ ಉಪಸ್ಥಿತರಿದ್ದು ಸಹಕರಿಸಿದರು. ಗ್ರಾಮದ ಕೃಷಿಕರು ಮತ್ತು ಮಹಿಳೆಯರು ತರಬೇತಿಯ ಪ್ರಯೋಜನ ಪಡೆದುಕೊಂಡರು.

Related posts

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!