23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳು ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶ ಇತ್ತಿಲಪೇಲ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತ ದೇಹ ನಾಲ್ಕು ಕಾಲುಗಳನ್ನು ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು.ಏ.11 ರಂದು ಸಂಜೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಶರ್ಮಿತಾ ಅವರಿಗೆ ಮಾಹಿತಿ ಬಂದಿದ್ದು. ಏ.12 ರಂದು ಬೆಳಗ್ಗೆ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು. ಕಾರ್ಕಳ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮೃತದೇಹವನ್ನು ವೈದ್ಯರು ಶವಪರೀಕ್ಷೆ ಮಾಡಿ ಅಲ್ಲಿಯೇ ದಫನ ಮಾಡಲಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಪ್ರಕರಣ ದಾಖಲಾಗಲಿದೆ‌.

ಯಾರೋ ದುಷ್ಕರ್ಮಿಗಳು ಚಿರತೆಯ ತಲೆಗೆ ಗುಂಡು ಹಾರಿಸಿ ಸಾಯಿಸಿ ಕಾಲಿನ ಉಗುರುಗಳಿಗಾಗಿ ಕಾಲನ್ನು ತುಂಡರಿಸಿಕೊಂಡು  ಹೋಗಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗುತ್ತಿದೆ.

ಹಲವಾರು ಸಮಯಗಳಿಂದ ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆ ನಡೆಯುತ್ತಿರುವ ಮಾಹಿತಿ ಸಂಬಂಧಪಟ್ಟ ಅಧಿಕಾರಿಗಳಿಗೆ ಇದ್ದರೂ ಸುಮ್ಮನಿದ್ದಾರೆ ಎಂಬುವುದು ಸ್ಥಳೀಯರ ಆರೋಪವಾಗಿದೆ. ಈ ಬಗ್ಗೆ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya
error: Content is protected !!