37.5 C
ಪುತ್ತೂರು, ಬೆಳ್ತಂಗಡಿ
April 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

ನಾರಾವಿ: ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ-ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯರಾತ್ರಿ ಎ.12 ರಂದು ನಡೆದಿದೆ.

ಸುಮಾರು ರಾತ್ರಿ 12.15 ಕ್ಕೆ ಗಂಟೆಗೆ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಪುರುಷ ಗುಡ್ಡೆ ಎಂಬಲ್ಲಿ ಕೊಕ್ರಾಡಿ -ನಾರಾವಿ ಸಾರ್ವಜನಿಕ ಡಾಮರು ರಸ್ತೆಯಲ್ಲಿ  ಕೆ ಎ 19 ಇಪಿ 9677 ನೇ ಮೋಟಾರು ಸೈಕಲ್‌ನ್ನು ಅದರ ಸವಾರ ಪ್ರಶಾಂತ ರವರು ತಿರುವು ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲ ಬದಿಗೆ ಸವಾರಿ ಮಾಡಿಕೊಂಡು ಬಂದು ರಸ್ತೆಯ ಬಲ ಬದಿಯಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರಶಾಂತ್ ಮತ್ತು ಸಹ ಸವಾರ ದಿನೇಶ ರವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!