23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ.

ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ ಹತ್ತು ಹಲವಾರು ವಾಹನನಗಳು, ಪಾದಚಾರಿಗಳು, ನಡೆದುಕೊಂಡು ಹೋಗುವ ಪ್ರಮುಖ ರಸ್ತೆಯಾಗಿದ್ದು ಬದಿಯಲ್ಲಿರುವ ಬಸ್ ತಂಗುದಾನದ ಬದಿಯಲ್ಲಿ ಈ ಕೃತ್ಯ ಎಸಗಿರುವುದು ಸುತ್ತಮುತ್ತಲಿನ ಮನೆಗಳಲ್ಲಿ, ಪಾದಚಾರಿಗಳಲ್ಲಿ, ಸಾರ್ವಜನಿಕರಲ್ಲಿ ಭಯದ ವಾತವಾರಣ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರ ಬಸ್ ತಂಗುದಾನ ಆಶ್ರಯತಾಣವಾಗಿದೆ ಆದರೆ ಇದರ ಸಮೀಪದಲ್ಲಿ ಇಂತಹ ಕೃತ್ಯ ನಡೆಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಕಠಿಣ ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಸಿಸಿ ಕ್ಯಾಮರ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಾಮಾಚಾರ ಪದೇ ಪದೇ ಈ ಪರಿಸರದಲ್ಲಿ ನಡೆಯುತ್ತಿದ್ದು ಸಾರ್ವಜನಿಕರಿಗೆ ಭಯ ಉಂಟುಮಾಡಿದೆ. ತೆಂಗಿನಕಾಯಿ-ಕುಂಬಳಕಾಯಿ ಸಹಿತ ವಿವಿಧ ವಸ್ತುಗಳ ಮಾರ್ಗ ಬದಿಯಲ್ಲಿ ಸಾರ್ವಜನಿಕರಿಗೆ ಕಾಣಸಿಗುತ್ತಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಸಾರ್ವಜಿಕರು ಆಗ್ರಹಿಸುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯತ್, ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya
error: Content is protected !!