July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ.

ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ ಹತ್ತು ಹಲವಾರು ವಾಹನನಗಳು, ಪಾದಚಾರಿಗಳು, ನಡೆದುಕೊಂಡು ಹೋಗುವ ಪ್ರಮುಖ ರಸ್ತೆಯಾಗಿದ್ದು ಬದಿಯಲ್ಲಿರುವ ಬಸ್ ತಂಗುದಾನದ ಬದಿಯಲ್ಲಿ ಈ ಕೃತ್ಯ ಎಸಗಿರುವುದು ಸುತ್ತಮುತ್ತಲಿನ ಮನೆಗಳಲ್ಲಿ, ಪಾದಚಾರಿಗಳಲ್ಲಿ, ಸಾರ್ವಜನಿಕರಲ್ಲಿ ಭಯದ ವಾತವಾರಣ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರ ಬಸ್ ತಂಗುದಾನ ಆಶ್ರಯತಾಣವಾಗಿದೆ ಆದರೆ ಇದರ ಸಮೀಪದಲ್ಲಿ ಇಂತಹ ಕೃತ್ಯ ನಡೆಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಕಠಿಣ ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಸಿಸಿ ಕ್ಯಾಮರ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಾಮಾಚಾರ ಪದೇ ಪದೇ ಈ ಪರಿಸರದಲ್ಲಿ ನಡೆಯುತ್ತಿದ್ದು ಸಾರ್ವಜನಿಕರಿಗೆ ಭಯ ಉಂಟುಮಾಡಿದೆ. ತೆಂಗಿನಕಾಯಿ-ಕುಂಬಳಕಾಯಿ ಸಹಿತ ವಿವಿಧ ವಸ್ತುಗಳ ಮಾರ್ಗ ಬದಿಯಲ್ಲಿ ಸಾರ್ವಜನಿಕರಿಗೆ ಕಾಣಸಿಗುತ್ತಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಸಾರ್ವಜಿಕರು ಆಗ್ರಹಿಸುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯತ್, ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ಕಡ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಗೆ ಮುಕ್ತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya
error: Content is protected !!