September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ.

ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ ಹತ್ತು ಹಲವಾರು ವಾಹನನಗಳು, ಪಾದಚಾರಿಗಳು, ನಡೆದುಕೊಂಡು ಹೋಗುವ ಪ್ರಮುಖ ರಸ್ತೆಯಾಗಿದ್ದು ಬದಿಯಲ್ಲಿರುವ ಬಸ್ ತಂಗುದಾನದ ಬದಿಯಲ್ಲಿ ಈ ಕೃತ್ಯ ಎಸಗಿರುವುದು ಸುತ್ತಮುತ್ತಲಿನ ಮನೆಗಳಲ್ಲಿ, ಪಾದಚಾರಿಗಳಲ್ಲಿ, ಸಾರ್ವಜನಿಕರಲ್ಲಿ ಭಯದ ವಾತವಾರಣ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರ ಬಸ್ ತಂಗುದಾನ ಆಶ್ರಯತಾಣವಾಗಿದೆ ಆದರೆ ಇದರ ಸಮೀಪದಲ್ಲಿ ಇಂತಹ ಕೃತ್ಯ ನಡೆಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಕಠಿಣ ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಸಿಸಿ ಕ್ಯಾಮರ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಾಮಾಚಾರ ಪದೇ ಪದೇ ಈ ಪರಿಸರದಲ್ಲಿ ನಡೆಯುತ್ತಿದ್ದು ಸಾರ್ವಜನಿಕರಿಗೆ ಭಯ ಉಂಟುಮಾಡಿದೆ. ತೆಂಗಿನಕಾಯಿ-ಕುಂಬಳಕಾಯಿ ಸಹಿತ ವಿವಿಧ ವಸ್ತುಗಳ ಮಾರ್ಗ ಬದಿಯಲ್ಲಿ ಸಾರ್ವಜನಿಕರಿಗೆ ಕಾಣಸಿಗುತ್ತಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಸಾರ್ವಜಿಕರು ಆಗ್ರಹಿಸುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯತ್, ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya
error: Content is protected !!