July 23, 2026
ಅಪರಾಧ ಸುದ್ದಿ

ಬೆಳ್ತಂಗಡಿ : ಕೊಯ್ಯೂರಿನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ ಆರೋಪಿ ಉಜ್ಜಲ್ ಗೌಡನಿಗೆ ಜಾಮೀನು ಮಂಜೂರು

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರಲ್ಲಿ ಒಬ್ಬನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಆರೋಪಿಯನ್ನು ಬಂಧಿಸಿ ಮಂಗಳೂರು ಸೆಕ್ಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಬೆಳ್ತಂಗಡಿ ಪೊಲೀಸರು ಹಾಜರುಪಡಿಸಿದ್ದು ನ್ಯಾಯಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿಗೆ ಬೇಲಿಯ ಕೆಲಸಕ್ಕೆಂದು ಸ್ಥಳೀಯ ಆರು ಮಂದಿ ಯುವಕರು ಏ.11 ರಂದು ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ಕೊಯ್ಯೂರು ಗ್ರಾಮದ ಪಾಂಬೇಲು ನಿವಾಸಿ ರಾಮಯ್ಯ ಗೌಡರ ಮಗ ಉಜ್ವಲ್ ಗೌಡ(45) ತಮಗೆ ಸೇರಿದ ಜಾಗ ಇದು ಎಂದು ಬೇಲಿ ಹಾಕುತ್ತಿರುವ ಬಗ್ಗೆ ತಕರಾರು ತೆಗೆದಿದ್ದು ಕಾರ್ಮಿಕ ಕೊಯ್ಯೂರು ಗ್ರಾಮದ ನೀರಕಜೆ ನಿವಾಸಿ ಮಧು(28) ಎಂಬಾತನಿಗೆ ಜಾತಿ ನಿಂದನೆ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಬೆನ್ನು ಮೂಲೆಗೆ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕ ಮಧುನನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಏ.11 ರಂದು ಪ್ರಕರಣ ದಾಖಲಾಗಿದ್ದು.ಆರೋಪಿ ಉಜ್ವಲ್ ಗೌಡ ಎಂಬಾತನನ್ನು ಪೊಲೀಸರು ಏ.12 ರಂದು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ರಾತ್ರಿ ಮಂಗಳೂರು ಸೆಕ್ಷನ್ಸ್ ಕೋರ್ಟ್ ನ್ಯಾಯಾಧೀಶರ ಮನೆಗೆ ಹಾಜರು ಪಡಿಸಿದ್ದರು ನ್ಯಾಯಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ, ಮೂರು ಆರೋಪಿಗಳ ಸೆರೆ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!