23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
error: Content is protected !!