25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!