September 6, 2026
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya
error: Content is protected !!