26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya
error: Content is protected !!