July 23, 2026
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya
error: Content is protected !!