25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ


ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.
ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು 20 ಮೀ.ನಷ್ಟು ಕೇಬಲ್ ಸುಟ್ಟು ಹೋಗಿದ್ದು ಕಂಬದ ಭಾಗವು ಕರಟಿದೆ.
ಸ್ಥಳೀಯರು ತಕ್ಷಣ ಮೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ತಿಳಿಸಿ ಬಳಿಕ ಬೆಂಕಿಯನ್ನು ಆರಿಸಿದರು.
ಈ ಪ್ರದೇಶದಲ್ಲಿ ಅರಣ್ಯ ಭಾಗ,ಮನೆಗಳು ಇದ್ದು ಸ್ಥಳೀಯರ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

Related posts

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya
error: Content is protected !!