July 23, 2026
ಅಪರಾಧ ಸುದ್ದಿ

ಬೆಳ್ತಂಗಡಿ : ಕೊಯ್ಯೂರಿನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ ಆರೋಪಿ ಉಜ್ಜಲ್ ಗೌಡನಿಗೆ ಜಾಮೀನು ಮಂಜೂರು

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರಲ್ಲಿ ಒಬ್ಬನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಆರೋಪಿಯನ್ನು ಬಂಧಿಸಿ ಮಂಗಳೂರು ಸೆಕ್ಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಬೆಳ್ತಂಗಡಿ ಪೊಲೀಸರು ಹಾಜರುಪಡಿಸಿದ್ದು ನ್ಯಾಯಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿಗೆ ಬೇಲಿಯ ಕೆಲಸಕ್ಕೆಂದು ಸ್ಥಳೀಯ ಆರು ಮಂದಿ ಯುವಕರು ಏ.11 ರಂದು ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ಕೊಯ್ಯೂರು ಗ್ರಾಮದ ಪಾಂಬೇಲು ನಿವಾಸಿ ರಾಮಯ್ಯ ಗೌಡರ ಮಗ ಉಜ್ವಲ್ ಗೌಡ(45) ತಮಗೆ ಸೇರಿದ ಜಾಗ ಇದು ಎಂದು ಬೇಲಿ ಹಾಕುತ್ತಿರುವ ಬಗ್ಗೆ ತಕರಾರು ತೆಗೆದಿದ್ದು ಕಾರ್ಮಿಕ ಕೊಯ್ಯೂರು ಗ್ರಾಮದ ನೀರಕಜೆ ನಿವಾಸಿ ಮಧು(28) ಎಂಬಾತನಿಗೆ ಜಾತಿ ನಿಂದನೆ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಬೆನ್ನು ಮೂಲೆಗೆ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕ ಮಧುನನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಏ.11 ರಂದು ಪ್ರಕರಣ ದಾಖಲಾಗಿದ್ದು.ಆರೋಪಿ ಉಜ್ವಲ್ ಗೌಡ ಎಂಬಾತನನ್ನು ಪೊಲೀಸರು ಏ.12 ರಂದು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ರಾತ್ರಿ ಮಂಗಳೂರು ಸೆಕ್ಷನ್ಸ್ ಕೋರ್ಟ್ ನ್ಯಾಯಾಧೀಶರ ಮನೆಗೆ ಹಾಜರು ಪಡಿಸಿದ್ದರು ನ್ಯಾಯಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

Related posts

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya
error: Content is protected !!