24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya
error: Content is protected !!