September 6, 2026
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya
error: Content is protected !!