July 23, 2026
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya
error: Content is protected !!