September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ) ಅವರು ವಯೋಸಹಜ ಅಸೌಖ್ಯದಿಂದ ಬಳಲಿ ಇಂದು (ಎ.14 ರಂದು) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.


ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿಯಾಗಿರುವ ಮಂಜುನಾಥ ಕಾಮತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದಾರೆ. ಮಾಜಿ ಸಚಿವ ಗಂಗಾಧರ ಗೌಡ ಸಚಿವರಾಗಿದ್ದ ಅವಧಿಯಲ್ಲಿ ಅವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.


ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರಾಗಿ ದೇವಸ್ಥಾನದ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದರು. ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಇವರು ಬಂಗಾಡಿ ಸಿ.ಎ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ವರ್ತಕರಾಗಿ, ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆಯನ್ನು ಗಳಿಸಿದ್ದರು.
ಮೃತರು ಪುತ್ರ ಸತೀಶ್ ಕಾಮತ್ ಹಾಗೂ ನಾಲ್ವರು ಹೆಣ್ಣು ಮಕ್ಕಳು, ಬಂಧು-ವರ್ಗದವರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya
error: Content is protected !!