25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ) ಅವರು ವಯೋಸಹಜ ಅಸೌಖ್ಯದಿಂದ ಬಳಲಿ ಇಂದು (ಎ.14 ರಂದು) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.


ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿಯಾಗಿರುವ ಮಂಜುನಾಥ ಕಾಮತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದಾರೆ. ಮಾಜಿ ಸಚಿವ ಗಂಗಾಧರ ಗೌಡ ಸಚಿವರಾಗಿದ್ದ ಅವಧಿಯಲ್ಲಿ ಅವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.


ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರಾಗಿ ದೇವಸ್ಥಾನದ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದರು. ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಇವರು ಬಂಗಾಡಿ ಸಿ.ಎ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ವರ್ತಕರಾಗಿ, ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆಯನ್ನು ಗಳಿಸಿದ್ದರು.
ಮೃತರು ಪುತ್ರ ಸತೀಶ್ ಕಾಮತ್ ಹಾಗೂ ನಾಲ್ವರು ಹೆಣ್ಣು ಮಕ್ಕಳು, ಬಂಧು-ವರ್ಗದವರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya
error: Content is protected !!