July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ) ಅವರು ವಯೋಸಹಜ ಅಸೌಖ್ಯದಿಂದ ಬಳಲಿ ಇಂದು (ಎ.14 ರಂದು) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.


ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿಯಾಗಿರುವ ಮಂಜುನಾಥ ಕಾಮತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದಾರೆ. ಮಾಜಿ ಸಚಿವ ಗಂಗಾಧರ ಗೌಡ ಸಚಿವರಾಗಿದ್ದ ಅವಧಿಯಲ್ಲಿ ಅವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.


ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರಾಗಿ ದೇವಸ್ಥಾನದ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದರು. ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಇವರು ಬಂಗಾಡಿ ಸಿ.ಎ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ವರ್ತಕರಾಗಿ, ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆಯನ್ನು ಗಳಿಸಿದ್ದರು.
ಮೃತರು ಪುತ್ರ ಸತೀಶ್ ಕಾಮತ್ ಹಾಗೂ ನಾಲ್ವರು ಹೆಣ್ಣು ಮಕ್ಕಳು, ಬಂಧು-ವರ್ಗದವರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya
error: Content is protected !!