37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ಇಂದು(ಎ.14) ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ :ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ದೀಪ ಬೆಳಗಿಸಿ ಮಾತನಾಡಿ ಅಂಬೇಡ್ಕರ್ ಕೇವಲ ಎಸ್. ಸಿ ಸಮುದಾಯಕ್ಕೆ ಮಾತ್ರ ನಾಯಕರಲ್ಲ ಇಡೀ ವಿಶ್ವವೆ ಮೆಚ್ಚುವಂತಹ ನಾಯಕ. ಇವರನ್ನು ಪ್ರತಿ ಮನೆಯಲ್ಲಿ ಪ್ರತಿ ಮನಸಲ್ಲೂ ಪೂಜಾ ಭಾವನೆಯಿಂದ ನೋಡುವಂತೆ ನಮ್ಮ ಮಕ್ಕಳಿಗೆ ಇವರ ಬಗ್ಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಎಸ್ ಸಿ ಮೋರ್ಚಾ ಬೆಳ್ತಂಗಡಿ ಮಂಡಲ ಅಧ್ಯಕ್ಷ ಈಶ್ವರ ಬೈರ ಪುಪ್ಪಾರ್ಚನೆಗೈದು ಮಾತನಾಡಿ ನಾವು ಸಮಾಜಮುಖಿಯಾಗಿ ಬೆಳೆಯುವುದರ ಜೊತೆ ಉತ್ತಮ ಶಿಕ್ಷಣದ ಜೊತೆ ನಮ್ಮವರನ್ನು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ ಬೆಳೆಸುವುದೇ ಅಂಬೇಡ್ಕರಿಗೆ ಕೊಡುವ ದೊಡ್ಡ ಗೌರವ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ರಾಘವ ಕಲ್ಮಂಜ, ಬೆಳ್ತಂಗಡಿ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ಕೊರಗಪ್ಪ ಅಳದಂಗಡಿ ಹಾಗೂ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದರು.

ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಜಿ. ಯಸ್. ಕಾರ್ಯಕ್ರಮ ನಿರೂಪಿಸಿ, ಪ್ರೇಮಚಂದ್ರ. ಕೆ ಧನ್ಯವಾದ ಸಮರ್ಪಿಸಿದರು.

Related posts

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya
error: Content is protected !!