July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

ಕನ್ಯಾಡಿ I ಗ್ರಾಮದ ಪಡ್ಪು ಶ್ರೀಮತಿ ಅಖಿಲ ಮತ್ತು ಅಶ್ವಥ್ ದಂಪತಿಗಳ ಪುತ್ರಿಯಾದ ಕುಮಾರಿ ಅದ್ವಿತಿ ರಾವ್ ಇವರು 2024 ಡಿ.1-ರಂದು ದಕ್ಷಿನಾಮ್ನಾಯ ಶ್ರೀ ಶಾರದಾ ಪೀಠಮ್ ಶೃಂಗೇರಿ ಇಲ್ಲಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕದ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಞ) ದಲ್ಲಿ ಪ್ರಥಮ ಶ್ರೇಣಿಯನ್ನು ಪಡೆದು, ಶೃಂಗೇರಿ ಜಗದ್ಗುರುಗಳ ಆಶೀರ್ವಾದವನ್ನು ಪಡೆದುದಕ್ಕಾಗಿ ಏ.10 ರಂದು ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಸತೀಶ್ಚಂದ್ರ ಜೈನ್ ಸುರ್ಯಗುತ್ತು, ಸಂಗ್ರಾಮ್ ಸುರ್ಯಗುತ್ತು ಇವರು ದೇವರ ಸನ್ನಿಧಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಮಂಡಳಿಯ ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ನಾಭಿರಾಜ್ ಜೈನ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya
error: Content is protected !!