September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಎ. 14 ಕೇವಲ ಅ೦ಬೇಡ್ಕರ್ ಅವರ ಹುಟ್ಟು ಹಬ್ಬವಲ್ಲ ನಮ್ಮ೦ತ ಶೋಷಿತರ ದೀನ ದಲಿತರ ಹುಟ್ಟು ಹಬ್ಬ ಎಂದರು. ಟ್ರಸ್ಟ್ ನ ಹಿರಿಯರಾದ ಬಾಬು ಕಲ್ಯರಡ್ಡ ದೀಪ ಬೆಳಗಿಸಿದರು.

ಈ ವೇಳೆ ಸಮಿತಿಯ ಪ್ರಮುಖರಾದ ಧರ್ಮರಾಜ್ ಕೊಪ್ಪದ ಬಾಕಿಮಾರು, ಸುಧಾಕರ ಹೊಸ ಮನೆ, ಗಜೇಂದ್ರ ಪಾಲ್ದಡ್ಕ, ಶೀನ, ಶಶಿಧರ, ಪ್ರಶಾ೦ತ್, ಸುರೇಶ್ ಹೊಸಮನೆ, ಗೀತಾ, ವಿಮಲ, ಕರ್ಗಿ ಕೊಪ್ಪದಬಾಕಿಮಾರು ಉಪಸ್ಥಿತರಿದ್ದರು.

Related posts

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya
error: Content is protected !!