30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!