April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

ಉಜಿರೆ: ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬವನ್ನು ಎಸ್. ಸಿ ಕಾಲೋನಿ ಕುಂಟಿನಿ ಉಜಿರೆಯಲ್ಲಿ ಆಚರಿಸಲಾಯಿತು.

ಟ್ರಸ್ಟ್ ನ ಉಪಾಧ್ಯಕ್ಷ ನಾರಾಯಣ್ ಗೌಡ ಕೊಳಂಬೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಭಾಷ್ ಗುರುವಾಯನಕೆರೆ, ಲಕ್ಷ್ಮಿ ನಾರಾಯಣ ಶೆಣೈ, ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ, ಅಂಬೇಡ್ಕರ್ ಬಗ್ಗೆ ಹಿತನುಡಿಯನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆಯ ಅಧ್ಯಕ್ಷ ಡಾ.ಎಂ.ಎಂ ದಯಾಕರ್ ವಹಿಸಿಕೊಂಡು ಅಂಬೇಡ್ಕರ್ ಜಯಂತಿಯ ಮಹತ್ವ, ಅಂಬೇಡ್ಕರ್ ಅವರ ಜೀವನದ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಆಗಮಿಸಿದ ಸ್ಥಳೀಯ ಬಾಂಧವರಿಗೆ ವಿಶು ಕಣಿಯನ್ನು ವಿತರಣೆ ಮಾಡಲಾಯಿತು. ಶ್ರೀಮತಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. ಗೋಶಾಲೆಯ ಕಾರ್ಯದರ್ಶಿ ನವೀನ್ ನೆರಿಯ ಧನ್ಯವಾದ ಸಲ್ಲಿಸಿದರು. ಟ್ರಸ್ಟ್ ನ ಮ್ಯಾನೇಜರ್ ಶ್ರೀಶ ಭಟ್ ಮತ್ತು ಶ್ರೀಮತಿ ಅನುಶ್ರೀ ಮುರುಳಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya
error: Content is protected !!