24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

ಉಜಿರೆ: ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬವನ್ನು ಎಸ್. ಸಿ ಕಾಲೋನಿ ಕುಂಟಿನಿ ಉಜಿರೆಯಲ್ಲಿ ಆಚರಿಸಲಾಯಿತು.

ಟ್ರಸ್ಟ್ ನ ಉಪಾಧ್ಯಕ್ಷ ನಾರಾಯಣ್ ಗೌಡ ಕೊಳಂಬೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಭಾಷ್ ಗುರುವಾಯನಕೆರೆ, ಲಕ್ಷ್ಮಿ ನಾರಾಯಣ ಶೆಣೈ, ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ, ಅಂಬೇಡ್ಕರ್ ಬಗ್ಗೆ ಹಿತನುಡಿಯನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆಯ ಅಧ್ಯಕ್ಷ ಡಾ.ಎಂ.ಎಂ ದಯಾಕರ್ ವಹಿಸಿಕೊಂಡು ಅಂಬೇಡ್ಕರ್ ಜಯಂತಿಯ ಮಹತ್ವ, ಅಂಬೇಡ್ಕರ್ ಅವರ ಜೀವನದ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಆಗಮಿಸಿದ ಸ್ಥಳೀಯ ಬಾಂಧವರಿಗೆ ವಿಶು ಕಣಿಯನ್ನು ವಿತರಣೆ ಮಾಡಲಾಯಿತು. ಶ್ರೀಮತಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. ಗೋಶಾಲೆಯ ಕಾರ್ಯದರ್ಶಿ ನವೀನ್ ನೆರಿಯ ಧನ್ಯವಾದ ಸಲ್ಲಿಸಿದರು. ಟ್ರಸ್ಟ್ ನ ಮ್ಯಾನೇಜರ್ ಶ್ರೀಶ ಭಟ್ ಮತ್ತು ಶ್ರೀಮತಿ ಅನುಶ್ರೀ ಮುರುಳಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya
error: Content is protected !!