32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ ಖಂಡಿತವಾಗಿ ನೀವು ಯಶಸ್ವಿಯಾಗಿ ಉದ್ಯಮ ನಡೆಸಬಹುದು. ಇದಕ್ಕೆ ಪೂರಕವಾಗಿ ಡಾ|. ಡಿ.ವೀರೇಂದ್ರ ಹೆಗ್ಗಡೆಯವರು ದೂರ ದೃಷ್ಟಿ ಈ ರುಡ್ ಸೆಟ್ ಸಂಸ್ಥೆ ಯು ನಿಮಗೆ ನಿರಂತರವಾಗಿ ನಿಮ್ಮ ಹಿಂದೆ ಇದ್ದು ಮಾಹಿತಿ-ಮಾರ್ಗದರ್ಶನ ನೀಡುತ್ತದೆ. ಬಹುಶ ಇಂದು ಇಡೀ ದೇಶದಲ್ಲಿ ರುಡ್ಸೆಟ್ ಸಂಸ್ಥೆಯ ಮೂಲಕ ತರಬೇತಿ ಪಡೆದ ಕೋಟ್ಯಂತರ ಯುವಜನರು ಯಶ್ವಸಿಯಾಗಿ ಉದ್ಯಮಶೀಲರಾಗಿದ್ದಾರೆ. ಇದು ಗ್ರಾಮೀಣ ಭಾಗ ಮಹಿಳೆಯರಿಗೆ ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ| ವಿಶ್ವನಾಥ ಪಿ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 06 ದಿನಗಳ ಕಾಲ ನಡೆದ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಆಶಯದಂತೆ ನಡೆದ ಈ ತರಬೇತಿ ನಿಮಗೆ ಹೆಚ್ಚು ಉಪಯೋಗವಾಗಲಿ ಎಂದು ಶುಭ ಹಾರೈಸಿದರು.

ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ತರಬೇತಿಯ ಹಿನ್ನೋಟ ನೀಡಿ, ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಿಬಿರಾರ್ಥಿ ಶ್ರೀಮತಿ ಸೌಮ್ಯ, ಕುಮಾರಿ ನೇಹಾ, ಶ್ರೀಮತಿ ಚೇತನಾ, ಕುಮಾರಿ ಚೈತ್ರ ಅವರುಗಳು ಪ್ರಾರ್ಥನೆ ನೇರವೇರಿಸಿದರು. ಶ್ರೀಮತಿ ಸೌಮ್ಯಲತಾ, ಶ್ರೀಮತಿ ಸುನೀತ, ಕುಮಾರಿ ಸಮೀನಾ ತರಬೇತಿಯ ಅನುಭವ ಹಂಚಿಕೊಂಡರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya
error: Content is protected !!