26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ ಖಂಡಿತವಾಗಿ ನೀವು ಯಶಸ್ವಿಯಾಗಿ ಉದ್ಯಮ ನಡೆಸಬಹುದು. ಇದಕ್ಕೆ ಪೂರಕವಾಗಿ ಡಾ|. ಡಿ.ವೀರೇಂದ್ರ ಹೆಗ್ಗಡೆಯವರು ದೂರ ದೃಷ್ಟಿ ಈ ರುಡ್ ಸೆಟ್ ಸಂಸ್ಥೆ ಯು ನಿಮಗೆ ನಿರಂತರವಾಗಿ ನಿಮ್ಮ ಹಿಂದೆ ಇದ್ದು ಮಾಹಿತಿ-ಮಾರ್ಗದರ್ಶನ ನೀಡುತ್ತದೆ. ಬಹುಶ ಇಂದು ಇಡೀ ದೇಶದಲ್ಲಿ ರುಡ್ಸೆಟ್ ಸಂಸ್ಥೆಯ ಮೂಲಕ ತರಬೇತಿ ಪಡೆದ ಕೋಟ್ಯಂತರ ಯುವಜನರು ಯಶ್ವಸಿಯಾಗಿ ಉದ್ಯಮಶೀಲರಾಗಿದ್ದಾರೆ. ಇದು ಗ್ರಾಮೀಣ ಭಾಗ ಮಹಿಳೆಯರಿಗೆ ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ| ವಿಶ್ವನಾಥ ಪಿ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 06 ದಿನಗಳ ಕಾಲ ನಡೆದ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಆಶಯದಂತೆ ನಡೆದ ಈ ತರಬೇತಿ ನಿಮಗೆ ಹೆಚ್ಚು ಉಪಯೋಗವಾಗಲಿ ಎಂದು ಶುಭ ಹಾರೈಸಿದರು.

ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ತರಬೇತಿಯ ಹಿನ್ನೋಟ ನೀಡಿ, ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಿಬಿರಾರ್ಥಿ ಶ್ರೀಮತಿ ಸೌಮ್ಯ, ಕುಮಾರಿ ನೇಹಾ, ಶ್ರೀಮತಿ ಚೇತನಾ, ಕುಮಾರಿ ಚೈತ್ರ ಅವರುಗಳು ಪ್ರಾರ್ಥನೆ ನೇರವೇರಿಸಿದರು. ಶ್ರೀಮತಿ ಸೌಮ್ಯಲತಾ, ಶ್ರೀಮತಿ ಸುನೀತ, ಕುಮಾರಿ ಸಮೀನಾ ತರಬೇತಿಯ ಅನುಭವ ಹಂಚಿಕೊಂಡರು.

Related posts

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya
error: Content is protected !!