July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ ಖಂಡಿತವಾಗಿ ನೀವು ಯಶಸ್ವಿಯಾಗಿ ಉದ್ಯಮ ನಡೆಸಬಹುದು. ಇದಕ್ಕೆ ಪೂರಕವಾಗಿ ಡಾ|. ಡಿ.ವೀರೇಂದ್ರ ಹೆಗ್ಗಡೆಯವರು ದೂರ ದೃಷ್ಟಿ ಈ ರುಡ್ ಸೆಟ್ ಸಂಸ್ಥೆ ಯು ನಿಮಗೆ ನಿರಂತರವಾಗಿ ನಿಮ್ಮ ಹಿಂದೆ ಇದ್ದು ಮಾಹಿತಿ-ಮಾರ್ಗದರ್ಶನ ನೀಡುತ್ತದೆ. ಬಹುಶ ಇಂದು ಇಡೀ ದೇಶದಲ್ಲಿ ರುಡ್ಸೆಟ್ ಸಂಸ್ಥೆಯ ಮೂಲಕ ತರಬೇತಿ ಪಡೆದ ಕೋಟ್ಯಂತರ ಯುವಜನರು ಯಶ್ವಸಿಯಾಗಿ ಉದ್ಯಮಶೀಲರಾಗಿದ್ದಾರೆ. ಇದು ಗ್ರಾಮೀಣ ಭಾಗ ಮಹಿಳೆಯರಿಗೆ ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ| ವಿಶ್ವನಾಥ ಪಿ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 06 ದಿನಗಳ ಕಾಲ ನಡೆದ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಆಶಯದಂತೆ ನಡೆದ ಈ ತರಬೇತಿ ನಿಮಗೆ ಹೆಚ್ಚು ಉಪಯೋಗವಾಗಲಿ ಎಂದು ಶುಭ ಹಾರೈಸಿದರು.

ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ತರಬೇತಿಯ ಹಿನ್ನೋಟ ನೀಡಿ, ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಿಬಿರಾರ್ಥಿ ಶ್ರೀಮತಿ ಸೌಮ್ಯ, ಕುಮಾರಿ ನೇಹಾ, ಶ್ರೀಮತಿ ಚೇತನಾ, ಕುಮಾರಿ ಚೈತ್ರ ಅವರುಗಳು ಪ್ರಾರ್ಥನೆ ನೇರವೇರಿಸಿದರು. ಶ್ರೀಮತಿ ಸೌಮ್ಯಲತಾ, ಶ್ರೀಮತಿ ಸುನೀತ, ಕುಮಾರಿ ಸಮೀನಾ ತರಬೇತಿಯ ಅನುಭವ ಹಂಚಿಕೊಂಡರು.

Related posts

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!