27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ) ಅವರು ವಯೋಸಹಜ ಅಸೌಖ್ಯದಿಂದ ಬಳಲಿ ಇಂದು (ಎ.14 ರಂದು) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.


ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿಯಾಗಿರುವ ಮಂಜುನಾಥ ಕಾಮತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದಾರೆ. ಮಾಜಿ ಸಚಿವ ಗಂಗಾಧರ ಗೌಡ ಸಚಿವರಾಗಿದ್ದ ಅವಧಿಯಲ್ಲಿ ಅವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.


ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರಾಗಿ ದೇವಸ್ಥಾನದ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದರು. ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಇವರು ಬಂಗಾಡಿ ಸಿ.ಎ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ವರ್ತಕರಾಗಿ, ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆಯನ್ನು ಗಳಿಸಿದ್ದರು.
ಮೃತರು ಪುತ್ರ ಸತೀಶ್ ಕಾಮತ್ ಹಾಗೂ ನಾಲ್ವರು ಹೆಣ್ಣು ಮಕ್ಕಳು, ಬಂಧು-ವರ್ಗದವರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!