23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ಇಂದು(ಎ.14) ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ :ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ದೀಪ ಬೆಳಗಿಸಿ ಮಾತನಾಡಿ ಅಂಬೇಡ್ಕರ್ ಕೇವಲ ಎಸ್. ಸಿ ಸಮುದಾಯಕ್ಕೆ ಮಾತ್ರ ನಾಯಕರಲ್ಲ ಇಡೀ ವಿಶ್ವವೆ ಮೆಚ್ಚುವಂತಹ ನಾಯಕ. ಇವರನ್ನು ಪ್ರತಿ ಮನೆಯಲ್ಲಿ ಪ್ರತಿ ಮನಸಲ್ಲೂ ಪೂಜಾ ಭಾವನೆಯಿಂದ ನೋಡುವಂತೆ ನಮ್ಮ ಮಕ್ಕಳಿಗೆ ಇವರ ಬಗ್ಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಎಸ್ ಸಿ ಮೋರ್ಚಾ ಬೆಳ್ತಂಗಡಿ ಮಂಡಲ ಅಧ್ಯಕ್ಷ ಈಶ್ವರ ಬೈರ ಪುಪ್ಪಾರ್ಚನೆಗೈದು ಮಾತನಾಡಿ ನಾವು ಸಮಾಜಮುಖಿಯಾಗಿ ಬೆಳೆಯುವುದರ ಜೊತೆ ಉತ್ತಮ ಶಿಕ್ಷಣದ ಜೊತೆ ನಮ್ಮವರನ್ನು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ ಬೆಳೆಸುವುದೇ ಅಂಬೇಡ್ಕರಿಗೆ ಕೊಡುವ ದೊಡ್ಡ ಗೌರವ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ರಾಘವ ಕಲ್ಮಂಜ, ಬೆಳ್ತಂಗಡಿ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ಕೊರಗಪ್ಪ ಅಳದಂಗಡಿ ಹಾಗೂ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದರು.

ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಜಿ. ಯಸ್. ಕಾರ್ಯಕ್ರಮ ನಿರೂಪಿಸಿ, ಪ್ರೇಮಚಂದ್ರ. ಕೆ ಧನ್ಯವಾದ ಸಮರ್ಪಿಸಿದರು.

Related posts

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!