24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ಇಂದು(ಎ.14) ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ :ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ದೀಪ ಬೆಳಗಿಸಿ ಮಾತನಾಡಿ ಅಂಬೇಡ್ಕರ್ ಕೇವಲ ಎಸ್. ಸಿ ಸಮುದಾಯಕ್ಕೆ ಮಾತ್ರ ನಾಯಕರಲ್ಲ ಇಡೀ ವಿಶ್ವವೆ ಮೆಚ್ಚುವಂತಹ ನಾಯಕ. ಇವರನ್ನು ಪ್ರತಿ ಮನೆಯಲ್ಲಿ ಪ್ರತಿ ಮನಸಲ್ಲೂ ಪೂಜಾ ಭಾವನೆಯಿಂದ ನೋಡುವಂತೆ ನಮ್ಮ ಮಕ್ಕಳಿಗೆ ಇವರ ಬಗ್ಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಎಸ್ ಸಿ ಮೋರ್ಚಾ ಬೆಳ್ತಂಗಡಿ ಮಂಡಲ ಅಧ್ಯಕ್ಷ ಈಶ್ವರ ಬೈರ ಪುಪ್ಪಾರ್ಚನೆಗೈದು ಮಾತನಾಡಿ ನಾವು ಸಮಾಜಮುಖಿಯಾಗಿ ಬೆಳೆಯುವುದರ ಜೊತೆ ಉತ್ತಮ ಶಿಕ್ಷಣದ ಜೊತೆ ನಮ್ಮವರನ್ನು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ ಬೆಳೆಸುವುದೇ ಅಂಬೇಡ್ಕರಿಗೆ ಕೊಡುವ ದೊಡ್ಡ ಗೌರವ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ರಾಘವ ಕಲ್ಮಂಜ, ಬೆಳ್ತಂಗಡಿ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ಕೊರಗಪ್ಪ ಅಳದಂಗಡಿ ಹಾಗೂ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದರು.

ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಜಿ. ಯಸ್. ಕಾರ್ಯಕ್ರಮ ನಿರೂಪಿಸಿ, ಪ್ರೇಮಚಂದ್ರ. ಕೆ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!