September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ಇಂದು(ಎ.14) ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ :ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ದೀಪ ಬೆಳಗಿಸಿ ಮಾತನಾಡಿ ಅಂಬೇಡ್ಕರ್ ಕೇವಲ ಎಸ್. ಸಿ ಸಮುದಾಯಕ್ಕೆ ಮಾತ್ರ ನಾಯಕರಲ್ಲ ಇಡೀ ವಿಶ್ವವೆ ಮೆಚ್ಚುವಂತಹ ನಾಯಕ. ಇವರನ್ನು ಪ್ರತಿ ಮನೆಯಲ್ಲಿ ಪ್ರತಿ ಮನಸಲ್ಲೂ ಪೂಜಾ ಭಾವನೆಯಿಂದ ನೋಡುವಂತೆ ನಮ್ಮ ಮಕ್ಕಳಿಗೆ ಇವರ ಬಗ್ಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಎಸ್ ಸಿ ಮೋರ್ಚಾ ಬೆಳ್ತಂಗಡಿ ಮಂಡಲ ಅಧ್ಯಕ್ಷ ಈಶ್ವರ ಬೈರ ಪುಪ್ಪಾರ್ಚನೆಗೈದು ಮಾತನಾಡಿ ನಾವು ಸಮಾಜಮುಖಿಯಾಗಿ ಬೆಳೆಯುವುದರ ಜೊತೆ ಉತ್ತಮ ಶಿಕ್ಷಣದ ಜೊತೆ ನಮ್ಮವರನ್ನು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ ಬೆಳೆಸುವುದೇ ಅಂಬೇಡ್ಕರಿಗೆ ಕೊಡುವ ದೊಡ್ಡ ಗೌರವ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ರಾಘವ ಕಲ್ಮಂಜ, ಬೆಳ್ತಂಗಡಿ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ಕೊರಗಪ್ಪ ಅಳದಂಗಡಿ ಹಾಗೂ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದರು.

ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಜಿ. ಯಸ್. ಕಾರ್ಯಕ್ರಮ ನಿರೂಪಿಸಿ, ಪ್ರೇಮಚಂದ್ರ. ಕೆ ಧನ್ಯವಾದ ಸಮರ್ಪಿಸಿದರು.

Related posts

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಧರ್ಮಸ್ಥಳದಲ್ಲಿ ಪುರಾಣ ಪ್ರವಚನ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya
error: Content is protected !!