September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

ಕನ್ಯಾಡಿ I ಗ್ರಾಮದ ಪಡ್ಪು ಶ್ರೀಮತಿ ಅಖಿಲ ಮತ್ತು ಅಶ್ವಥ್ ದಂಪತಿಗಳ ಪುತ್ರಿಯಾದ ಕುಮಾರಿ ಅದ್ವಿತಿ ರಾವ್ ಇವರು 2024 ಡಿ.1-ರಂದು ದಕ್ಷಿನಾಮ್ನಾಯ ಶ್ರೀ ಶಾರದಾ ಪೀಠಮ್ ಶೃಂಗೇರಿ ಇಲ್ಲಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕದ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಞ) ದಲ್ಲಿ ಪ್ರಥಮ ಶ್ರೇಣಿಯನ್ನು ಪಡೆದು, ಶೃಂಗೇರಿ ಜಗದ್ಗುರುಗಳ ಆಶೀರ್ವಾದವನ್ನು ಪಡೆದುದಕ್ಕಾಗಿ ಏ.10 ರಂದು ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಸತೀಶ್ಚಂದ್ರ ಜೈನ್ ಸುರ್ಯಗುತ್ತು, ಸಂಗ್ರಾಮ್ ಸುರ್ಯಗುತ್ತು ಇವರು ದೇವರ ಸನ್ನಿಧಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಮಂಡಳಿಯ ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ನಾಭಿರಾಜ್ ಜೈನ್ ಉಪಸ್ಥಿತರಿದ್ದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya
error: Content is protected !!