23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!