24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!