30.4 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!