Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!