27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

ಉಜಿರೆ: ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬವನ್ನು ಎಸ್. ಸಿ ಕಾಲೋನಿ ಕುಂಟಿನಿ ಉಜಿರೆಯಲ್ಲಿ ಆಚರಿಸಲಾಯಿತು.

ಟ್ರಸ್ಟ್ ನ ಉಪಾಧ್ಯಕ್ಷ ನಾರಾಯಣ್ ಗೌಡ ಕೊಳಂಬೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಭಾಷ್ ಗುರುವಾಯನಕೆರೆ, ಲಕ್ಷ್ಮಿ ನಾರಾಯಣ ಶೆಣೈ, ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ, ಅಂಬೇಡ್ಕರ್ ಬಗ್ಗೆ ಹಿತನುಡಿಯನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆಯ ಅಧ್ಯಕ್ಷ ಡಾ.ಎಂ.ಎಂ ದಯಾಕರ್ ವಹಿಸಿಕೊಂಡು ಅಂಬೇಡ್ಕರ್ ಜಯಂತಿಯ ಮಹತ್ವ, ಅಂಬೇಡ್ಕರ್ ಅವರ ಜೀವನದ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಆಗಮಿಸಿದ ಸ್ಥಳೀಯ ಬಾಂಧವರಿಗೆ ವಿಶು ಕಣಿಯನ್ನು ವಿತರಣೆ ಮಾಡಲಾಯಿತು. ಶ್ರೀಮತಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. ಗೋಶಾಲೆಯ ಕಾರ್ಯದರ್ಶಿ ನವೀನ್ ನೆರಿಯ ಧನ್ಯವಾದ ಸಲ್ಲಿಸಿದರು. ಟ್ರಸ್ಟ್ ನ ಮ್ಯಾನೇಜರ್ ಶ್ರೀಶ ಭಟ್ ಮತ್ತು ಶ್ರೀಮತಿ ಅನುಶ್ರೀ ಮುರುಳಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya
error: Content is protected !!