September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

ಉಜಿರೆ: ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬವನ್ನು ಎಸ್. ಸಿ ಕಾಲೋನಿ ಕುಂಟಿನಿ ಉಜಿರೆಯಲ್ಲಿ ಆಚರಿಸಲಾಯಿತು.

ಟ್ರಸ್ಟ್ ನ ಉಪಾಧ್ಯಕ್ಷ ನಾರಾಯಣ್ ಗೌಡ ಕೊಳಂಬೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಭಾಷ್ ಗುರುವಾಯನಕೆರೆ, ಲಕ್ಷ್ಮಿ ನಾರಾಯಣ ಶೆಣೈ, ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ, ಅಂಬೇಡ್ಕರ್ ಬಗ್ಗೆ ಹಿತನುಡಿಯನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆಯ ಅಧ್ಯಕ್ಷ ಡಾ.ಎಂ.ಎಂ ದಯಾಕರ್ ವಹಿಸಿಕೊಂಡು ಅಂಬೇಡ್ಕರ್ ಜಯಂತಿಯ ಮಹತ್ವ, ಅಂಬೇಡ್ಕರ್ ಅವರ ಜೀವನದ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಆಗಮಿಸಿದ ಸ್ಥಳೀಯ ಬಾಂಧವರಿಗೆ ವಿಶು ಕಣಿಯನ್ನು ವಿತರಣೆ ಮಾಡಲಾಯಿತು. ಶ್ರೀಮತಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. ಗೋಶಾಲೆಯ ಕಾರ್ಯದರ್ಶಿ ನವೀನ್ ನೆರಿಯ ಧನ್ಯವಾದ ಸಲ್ಲಿಸಿದರು. ಟ್ರಸ್ಟ್ ನ ಮ್ಯಾನೇಜರ್ ಶ್ರೀಶ ಭಟ್ ಮತ್ತು ಶ್ರೀಮತಿ ಅನುಶ್ರೀ ಮುರುಳಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya
error: Content is protected !!