22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ ಖಂಡಿತವಾಗಿ ನೀವು ಯಶಸ್ವಿಯಾಗಿ ಉದ್ಯಮ ನಡೆಸಬಹುದು. ಇದಕ್ಕೆ ಪೂರಕವಾಗಿ ಡಾ|. ಡಿ.ವೀರೇಂದ್ರ ಹೆಗ್ಗಡೆಯವರು ದೂರ ದೃಷ್ಟಿ ಈ ರುಡ್ ಸೆಟ್ ಸಂಸ್ಥೆ ಯು ನಿಮಗೆ ನಿರಂತರವಾಗಿ ನಿಮ್ಮ ಹಿಂದೆ ಇದ್ದು ಮಾಹಿತಿ-ಮಾರ್ಗದರ್ಶನ ನೀಡುತ್ತದೆ. ಬಹುಶ ಇಂದು ಇಡೀ ದೇಶದಲ್ಲಿ ರುಡ್ಸೆಟ್ ಸಂಸ್ಥೆಯ ಮೂಲಕ ತರಬೇತಿ ಪಡೆದ ಕೋಟ್ಯಂತರ ಯುವಜನರು ಯಶ್ವಸಿಯಾಗಿ ಉದ್ಯಮಶೀಲರಾಗಿದ್ದಾರೆ. ಇದು ಗ್ರಾಮೀಣ ಭಾಗ ಮಹಿಳೆಯರಿಗೆ ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ| ವಿಶ್ವನಾಥ ಪಿ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 06 ದಿನಗಳ ಕಾಲ ನಡೆದ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಆಶಯದಂತೆ ನಡೆದ ಈ ತರಬೇತಿ ನಿಮಗೆ ಹೆಚ್ಚು ಉಪಯೋಗವಾಗಲಿ ಎಂದು ಶುಭ ಹಾರೈಸಿದರು.

ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ತರಬೇತಿಯ ಹಿನ್ನೋಟ ನೀಡಿ, ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಿಬಿರಾರ್ಥಿ ಶ್ರೀಮತಿ ಸೌಮ್ಯ, ಕುಮಾರಿ ನೇಹಾ, ಶ್ರೀಮತಿ ಚೇತನಾ, ಕುಮಾರಿ ಚೈತ್ರ ಅವರುಗಳು ಪ್ರಾರ್ಥನೆ ನೇರವೇರಿಸಿದರು. ಶ್ರೀಮತಿ ಸೌಮ್ಯಲತಾ, ಶ್ರೀಮತಿ ಸುನೀತ, ಕುಮಾರಿ ಸಮೀನಾ ತರಬೇತಿಯ ಅನುಭವ ಹಂಚಿಕೊಂಡರು.

Related posts

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!