September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ ಖಂಡಿತವಾಗಿ ನೀವು ಯಶಸ್ವಿಯಾಗಿ ಉದ್ಯಮ ನಡೆಸಬಹುದು. ಇದಕ್ಕೆ ಪೂರಕವಾಗಿ ಡಾ|. ಡಿ.ವೀರೇಂದ್ರ ಹೆಗ್ಗಡೆಯವರು ದೂರ ದೃಷ್ಟಿ ಈ ರುಡ್ ಸೆಟ್ ಸಂಸ್ಥೆ ಯು ನಿಮಗೆ ನಿರಂತರವಾಗಿ ನಿಮ್ಮ ಹಿಂದೆ ಇದ್ದು ಮಾಹಿತಿ-ಮಾರ್ಗದರ್ಶನ ನೀಡುತ್ತದೆ. ಬಹುಶ ಇಂದು ಇಡೀ ದೇಶದಲ್ಲಿ ರುಡ್ಸೆಟ್ ಸಂಸ್ಥೆಯ ಮೂಲಕ ತರಬೇತಿ ಪಡೆದ ಕೋಟ್ಯಂತರ ಯುವಜನರು ಯಶ್ವಸಿಯಾಗಿ ಉದ್ಯಮಶೀಲರಾಗಿದ್ದಾರೆ. ಇದು ಗ್ರಾಮೀಣ ಭಾಗ ಮಹಿಳೆಯರಿಗೆ ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ| ವಿಶ್ವನಾಥ ಪಿ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 06 ದಿನಗಳ ಕಾಲ ನಡೆದ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಆಶಯದಂತೆ ನಡೆದ ಈ ತರಬೇತಿ ನಿಮಗೆ ಹೆಚ್ಚು ಉಪಯೋಗವಾಗಲಿ ಎಂದು ಶುಭ ಹಾರೈಸಿದರು.

ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ತರಬೇತಿಯ ಹಿನ್ನೋಟ ನೀಡಿ, ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಿಬಿರಾರ್ಥಿ ಶ್ರೀಮತಿ ಸೌಮ್ಯ, ಕುಮಾರಿ ನೇಹಾ, ಶ್ರೀಮತಿ ಚೇತನಾ, ಕುಮಾರಿ ಚೈತ್ರ ಅವರುಗಳು ಪ್ರಾರ್ಥನೆ ನೇರವೇರಿಸಿದರು. ಶ್ರೀಮತಿ ಸೌಮ್ಯಲತಾ, ಶ್ರೀಮತಿ ಸುನೀತ, ಕುಮಾರಿ ಸಮೀನಾ ತರಬೇತಿಯ ಅನುಭವ ಹಂಚಿಕೊಂಡರು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: ‘Institutions of Legacy’ಕಾಫಿ ಟೇಬಲ್ ಪುಸ್ತಕ ಹೆಗ್ಗಡೆಯವರಿಂದ ಲೋಕಾರ್ಪಣೆ

Suddi Udaya
error: Content is protected !!