26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ) ಅವರು ವಯೋಸಹಜ ಅಸೌಖ್ಯದಿಂದ ಬಳಲಿ ಇಂದು (ಎ.14 ರಂದು) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.


ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿಯಾಗಿರುವ ಮಂಜುನಾಥ ಕಾಮತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದಾರೆ. ಮಾಜಿ ಸಚಿವ ಗಂಗಾಧರ ಗೌಡ ಸಚಿವರಾಗಿದ್ದ ಅವಧಿಯಲ್ಲಿ ಅವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.


ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರಾಗಿ ದೇವಸ್ಥಾನದ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದರು. ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಇವರು ಬಂಗಾಡಿ ಸಿ.ಎ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ವರ್ತಕರಾಗಿ, ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆಯನ್ನು ಗಳಿಸಿದ್ದರು.
ಮೃತರು ಪುತ್ರ ಸತೀಶ್ ಕಾಮತ್ ಹಾಗೂ ನಾಲ್ವರು ಹೆಣ್ಣು ಮಕ್ಕಳು, ಬಂಧು-ವರ್ಗದವರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya
error: Content is protected !!