23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ) ಅವರು ವಯೋಸಹಜ ಅಸೌಖ್ಯದಿಂದ ಬಳಲಿ ಇಂದು (ಎ.14 ರಂದು) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.


ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿಯಾಗಿರುವ ಮಂಜುನಾಥ ಕಾಮತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದಾರೆ. ಮಾಜಿ ಸಚಿವ ಗಂಗಾಧರ ಗೌಡ ಸಚಿವರಾಗಿದ್ದ ಅವಧಿಯಲ್ಲಿ ಅವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.


ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರಾಗಿ ದೇವಸ್ಥಾನದ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದರು. ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಇವರು ಬಂಗಾಡಿ ಸಿ.ಎ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ವರ್ತಕರಾಗಿ, ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆಯನ್ನು ಗಳಿಸಿದ್ದರು.
ಮೃತರು ಪುತ್ರ ಸತೀಶ್ ಕಾಮತ್ ಹಾಗೂ ನಾಲ್ವರು ಹೆಣ್ಣು ಮಕ್ಕಳು, ಬಂಧು-ವರ್ಗದವರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya
error: Content is protected !!