23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

ಬೆಳ್ತಂಗಡಿ: ತಾಲೂಕು ಆಡಳಿತ, ಬೆಳ್ತಂಗಡಿ ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ.ಆರ್‌. ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ ಎ.14 ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಹ ಶಿಕ್ಷಕ ಅರವಿಂದ ಚೊಕ್ಕಾಡಿ ಮುಖ್ಯ ಭಾಷಣ ಮಾಡಿದರು. ತಹಶೀಲ್ದಾರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಪೃಥ್ವಿ ಸಾನಿಕಂ, ತಾ.ಪಂ.ಇಓ ಭವಾನಿ ಶಂಕರ್ ಎನ್., ಪ.ಪಂ.ಮುಖ್ಯಾಧಿಕಾರಿ ರಾಜೇಶ್ ಕೆ., ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಮಾಲಾಡಿ ಹಾಗೂ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಎನ್.ಎಸ್. ಉಪಸ್ಥಿತರಿದ್ದರು.

ದಲಿತ ಸಂಘದ ಮುಖಂಡರು, ಪ್ರತಿನಿಧಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿಗಳು, ಪ್ರಾಂಶುಪಾಲರು ಹಾಜರಿದ್ದರು.

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮುರಳೀಧರ್ ಸ್ವಾಗತಿಸಿ, ವಸತಿ ನಿಲಯದ ಮೇಲ್ವಿಚಾರಕಿ ಹೇಮಾಲತಾ ನಿರೂಪಿಸಿದರು.

Related posts

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!