23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ಇಂದು(ಎ.14) ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ :ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ದೀಪ ಬೆಳಗಿಸಿ ಮಾತನಾಡಿ ಅಂಬೇಡ್ಕರ್ ಕೇವಲ ಎಸ್. ಸಿ ಸಮುದಾಯಕ್ಕೆ ಮಾತ್ರ ನಾಯಕರಲ್ಲ ಇಡೀ ವಿಶ್ವವೆ ಮೆಚ್ಚುವಂತಹ ನಾಯಕ. ಇವರನ್ನು ಪ್ರತಿ ಮನೆಯಲ್ಲಿ ಪ್ರತಿ ಮನಸಲ್ಲೂ ಪೂಜಾ ಭಾವನೆಯಿಂದ ನೋಡುವಂತೆ ನಮ್ಮ ಮಕ್ಕಳಿಗೆ ಇವರ ಬಗ್ಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಎಸ್ ಸಿ ಮೋರ್ಚಾ ಬೆಳ್ತಂಗಡಿ ಮಂಡಲ ಅಧ್ಯಕ್ಷ ಈಶ್ವರ ಬೈರ ಪುಪ್ಪಾರ್ಚನೆಗೈದು ಮಾತನಾಡಿ ನಾವು ಸಮಾಜಮುಖಿಯಾಗಿ ಬೆಳೆಯುವುದರ ಜೊತೆ ಉತ್ತಮ ಶಿಕ್ಷಣದ ಜೊತೆ ನಮ್ಮವರನ್ನು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ ಬೆಳೆಸುವುದೇ ಅಂಬೇಡ್ಕರಿಗೆ ಕೊಡುವ ದೊಡ್ಡ ಗೌರವ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ರಾಘವ ಕಲ್ಮಂಜ, ಬೆಳ್ತಂಗಡಿ ಎಸ್. ಸಿ ಮೋರ್ಚಾ ಉಪಾಧ್ಯಕ್ಷ ಕೊರಗಪ್ಪ ಅಳದಂಗಡಿ ಹಾಗೂ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದರು.

ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಜಿ. ಯಸ್. ಕಾರ್ಯಕ್ರಮ ನಿರೂಪಿಸಿ, ಪ್ರೇಮಚಂದ್ರ. ಕೆ ಧನ್ಯವಾದ ಸಮರ್ಪಿಸಿದರು.

Related posts

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya
error: Content is protected !!