24.4 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya
error: Content is protected !!