July 23, 2026
Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!